ಕೈಲಾಸವಾಸ ಗೌರೀಶ ಈಶ /Kailaasavasa gowrisha
ರಚನೆ : ವಿಜಯ ದಾಸರು ಕೈಲಾಸ ವಾಸ ಗೌರೀಶ ಈಶತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ||ಪ|| ಅಹೋರಾತ್ರಿಯಲ್ಲಿ ನಾನು ಅನುಜರಾಗ್ರಣಿಯಾಗಿಮಹಿಯೊಳಗೆ ಚರಿಸಿದೆನೋ ಮಹದೇವನೇಅಹಿಭೂಶಣನೆ ಎನ್ನ ಅವಗುಣಗಳೆಣಿಸದಲೇವಿಹಿತಧರ್ಮದಲಿಡು ವಿಷ್ಣು ಭಕುತಿಯನು ಕೊಡು ಶಂಭೋ|೧| ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆಧನುಜಗತ ಮದಹಾರಿ ದಂಡ ಪ್ರಣಾಮವ ಮಾಡ್ಪೆಮಣಿಸು ಈ ಶಿರವ ಸಜ್ಜನ ಚರಣ ಕಮಲದಲ್ಲಿ ಶಂಭೋ|೨| ಭಾಗೀರಥಿಧರನೆ ಭಯವ ಪರಿಹರಿಸಯ್ಯಲೇಸಾಗಿ…